ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಣೆ: ಶಿವಸೇನೆಯ ಪಾಲ್ಘರ್ ಶಾಸಕ ನಾಪತ್ತೆ!

ಭಾಸ್ಕರ ಪತ್ರಿಕೆ
0


ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಟಿಕೆಟ್ ನಿರಾಕರಿಸಿದ ನಂತರ ಅಸಮಾಧಾನಗೊಂಡಿದ್ದ ಪಾಲ್ಘರ್ ನ ಶಿವಸೇನೆಯ ಹಾಲಿ ಶಾಸಕ ಶ್ರೀನಿವಾಸ್ ವಂಗಾ ಅವರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಇನ್ನು ಈ ಕುರಿತು ವಂಗಾ ಅವರ ಕುಟುಂಬವು ಇಲ್ಲಿಯವರೆಗೆ ಯಾವುದೇ ಪೊಲೀಸ್ ದೂರು ದಾಖಲಿಸಿಲ್ಲ. ಬುಧವಾರ, ಪಾಲ್ಘರ್ ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಂಗಾ ಎಲ್ಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು. ಸೋಮವಾರ ಸಂಜೆಯಿಂದ ಶಾಸಕರು ಸಂಪರ್ಕದಲ್ಲಿಲ್ಲ.
ಕುಟುಂಬ ಸದಸ್ಯರು ಅವರನ್ನು ಹುಡುಕಿದ್ದಾರೆ. ಆದರೆ ಕುಟುಂಬದವ್ರು ಅವ್ರ ಮಾನಸಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಶಿವಸೇನೆ ಟಿಕೆಟ್ ನಿರಾಕರಿಸಿದ ನಂತರ ವಂಗಾ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪರವಾಗಿ ನಿಂತು ಅವ್ರ ಪಕ್ಷಕ್ಕೆ ಸೇರುವ ಮೂಲಕ ಅವರು ಗಂಭೀರ ತಪ್ಪು ಮಾಡಿದ್ದೇನೆ ಎಂದು ಹೇಳಿದ್ದರು. ವಂಗಾ ಅವರ ಭಾವನಾತ್ಮಕ ಪ್ರತಿಕ್ರಿಯೆಗಳ ವೀಡಿಯೊಗಳು ಅಂದಿನಿಂದ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿ ಚಾನೆಲ್ ಗಳಲ್ಲಿ ವೈರಲ್ ಆಗಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*