ಚಾಮರಾಜನಗರ: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದವನನ್ನು ಚಾಮರಾಜನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ, ಹುಲಿ ಉಗುರನ್ನು ವಶಕ್ಕೆ ಪಡೆದಿದ್ದಾರೆ.
ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.ಚಾಮರಾಜನಗರ ತಾಲೂಕು ಬೂದಿಪಡಗ ಗ್ರಾಮದ ಚಿಕ್ಕಮಾದ ಬಂಧಿತ ಆರೋಪಿಯಾಗಿದ್ದು. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

