ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದ 27 ವರ್ಷದ ವಿವಾಹಿತ ಮಹಿಳೆ ತನ್ನ ಒಂಬತ್ತು ತಿಂಗಳ ಮಗುವನ್ನು ಛಾವಣಿಯಿಂದ ಎಸೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಅಧಿಕಾರಿಯೊಬ್ಬರ ಪ್ರಕಾರ, ಅಂಜು ದೇವಿ ತನ್ನ ಸಹೋದರಿಯೊಂದಿಗೆ ಜಗಳವಾಡಿದ್ದಳು. ಈ ಸಮಯದಲ್ಲಿ ಅವಳು ಮಗುವನ್ನು ಕೃಷ್ಣ ನಗರ ಪ್ರದೇಶದ ಎರಡು ಅಂತಸ್ತಿನ ಮನೆಯ ಮೇಲಿಂದ ಎಸೆದಳು.
ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ವೈದ್ಯರು ಮಗು ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ ಎಂದು ಬಲ್ಲಿಯಾ ಪೊಲೀಸ್ ವರಿಷ್ಠಾಧಿಕಾರಿ ಓಂವೀರ್ ಸಿಂಗ್ ತಿಳಿಸಿದ್ದಾರೆ.
ಪೊಲೀಸರು ಅಂಜು ದೇವಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮಗುವಿನ ಅಜ್ಜಿ ಶೋಭಾ ದೇವಿ ನೀಡಿದ ದೂರಿನ ಆಧಾರದ ಮೇಲೆ ಬಿಎನ್ಎಸ್ ನ ಸೆಕ್ಷನ್ 105 (ಕೊಲೆಗೆ ಸಮವಲ್ಲದ ನರಹತ್ಯೆಗೆ ಶಿಕ್ಷೆ) ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಅಂಜು ದೇವಿ ಪ್ರೇಮ ವಿವಾಹವಾಗಿದ್ದು, ಕಳೆದ ಎರಡು ವರ್ಷಗಳಿಂದ ತನ್ನ ತಾಯಿಯೊಂದಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಅಂಜು ಅವರ ಅಕ್ಕ ಮನಿಷಾ ಕೂಡ ಕಳೆದ ಎರಡು ತಿಂಗಳಿನಿಂದ ಅದೇ ಮನೆಯಲ್ಲಿ ವಾಸಿಸುತ್ತಿದ್ದರು.

