ತಿಪಟೂರು: ಗೋ ಸೇವಾ ಗತಿವಿಧಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ ನಂದಿ ರಥಯಾತ್ರೆ ತುಮಕೂರು ಜಿಲ್ಲೆ ಹುಳಿಯಾರು ಪಟ್ಟಣಕ್ಕೆ ಆಗಮಿಸಿದ ವೇಳೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯರು ರಾಸುಗಳನ್ನು ಮೆರವಣಿಗೆಯಲ್ಲಿ ತಮ್ಮೊಂದಿಗೆ ಕರೆದುಕೊಂಡು ಬಂದು ಯಾತ್ರೆಗೆ ಮತ್ತಷ್ಟು ಮೆರುಗು ನೀಡಿದರು.

