ಬೆಂಗಳೂರು: ಕರ್ನಾಟಕ ಅಹಿಂದ ಜನ ಸಂಘದ ಮೈಸೂರು ಜಿಲ್ಲಾಧ್ಯಕ್ಷರಾಗಿ ಮಹಾದೇವ ಪಿ ರವರನ್ನು ನೇಮಕ ಮಾಡಲಾಗಿದೆ. ಮಹಾದೇವಅವರು ಅಹಿಂದ ಜನರ ಶ್ರೇಯೋಭಿವೃದ್ಧಿಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅಹಿಂದ ಜನ ಸಮುದಾಯದ ಜನರ ಮುಖ್ಯವಾಹಿನಿಗೆ ತರುವ ಹಾಗೂ ಸಂಘಟನೆ ಮಾಡಲು ಜವಾಬ್ದಾರಿ ವಹಿಸಲಾಗಿದೆ ಎಂದು ಅಹಿಂದ ಜನ ಸಂಘದ ಸಂಸ್ಥಾಪಕರು ಹಾಗೂ ರಾಜ್ಯಧ್ಯಕ್ಷರಾದ ಅಯ್ಯಪ್ಪ ಗೌಡ ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ನೂತನವಾಗಿ ಮೈಸೂರು ಜಿಲ್ಲಾಧ್ಯಕ್ಷರಾಗಿರುವ ಪಿ ಮಹದೇವ ಅವರಿಗೆ ತಿಪಟೂರಿನ ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್ ಹಾಗೂ ಭಾಸ್ಕರ ಪತ್ರಿಕಾ ಬಳಗದ ವತಿಯಿಂದ ಅಭಿನಂದನೆಗಳು.


