ಎರಡೂವರೇ ವರ್ಷದ ಕಂದನ ಕೈಗೆ ಬರೆ ಎಳೆದು, ಡೈಪರ್‌ನಲ್ಲಿ ಖಾರಪುಡಿ ಹಾಕಿ ವಿಕೃತಿ ಮೆರೆದ ಅಂಗನವಾಡಿ ಸಹಾಯಕಿ

ಭಾಸ್ಕರ ಪತ್ರಿಕೆ
0

 

ಕನಕಪುರ: ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ, ಈ ದರಿದ್ರ ಘಟನೆ  ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ, ಮಹರಾಜಕಟ್ಟೆ ಗ್ರಾಮದ ರಮೇಶ್ ಹಾಗೂ ಚೈತ್ರಾ ಎಂಬುವವರ ಮಗು ದೀಕ್ಷಿತ್​​ ಮೇಲೆ ಅಂಗನವಾಡಿ ಸಹಾಯಕಿ ಚಂದ್ರಮ್ಮ ಈ ವಿಕೃತಿ ಮೆರೆದಿದ್ದಾಳೆ.
ಸದರೀ ಘಟನೆ ಸಂಬಂಧ ಅಂಗನವಾಡಿ ಸಹಾಯಕಿ ಚಂದ್ರಮ್ಮ ಎಂಬವರ ಮೇಲೆ ಮಗುವಿನ ಪೋಷಕರು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬೆನ್ನಲ್ಲೇ ಚಂದ್ರಮ್ಮನನ್ನು ಅಮಾನತು ಮಾಡಲಾಗಿದೆ
ಅಂಗನವಾಡಿಯಲ್ಲಿ ಹಠ ಮಾಡುತ್ತಿದ್ದನೆಂದು ಚಂದ್ರಮ್ಮ ಕಂದನ ಕೈಗೆ ಬರೆ ಕೊಟ್ಟು,ನಂತರ 
ಡೈಪರ್ ಒಳಗೆ ಖಾರದಪುಡಿ ಹಾಕಿದ್ದಾರೆ, ಅಂಗನವಾಡಿಯಿಂದ ಮಗು ಕರೆತರಲು ಹೋದಾಗ ಪೋಷಕರು ಇದನ್ನು ಗಮನಿಸಿ ಬಳಿಕ ದೂರು ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*