ಯುಗಾದಿ ಹಬ್ಬದ ದಿನವೇ ಘೋರ ದುರಂತ: ಕೃಷ್ಣಾನದಿಯಲ್ಲಿ ಮುಳುಗಿ ಮೂವರು ಬಾಲಕರು ಸಾವು

ಭಾಸ್ಕರ ಪತ್ರಿಕೆ
0

ಬಾಗಲಕೋಟೆ: ಯುಗಾದಿ ಹಬ್ಬದ ದಿನವೇ ಘೋರ ದುರಂತ ನಡೆದಿದ್ದು, ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ಕೃಷ್ಣಾನದಿಯಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟ ಘಟನೆ ನಡೆದಿದೆ.
ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ.

ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ.

ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*