ಶಿವಮೊಗ್ಗ: ಡಿಎಆರ್ ನಲ್ಲಿ ಹೆಡ್ಕಾನ್ಸಟೇಬಲ್ಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ಬೇಡಿಕೆ ಇಟ್ಟಿದ್ದರು, ಈ ಸಂಬಂಧ ಡಿಎಆರ್ನ ಆ ಹೆಡ್ಕಾನ್ಸಟೇಬಲ್ ಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು, ಖೆಡ್ಡಾ ಯೋಜನೆಯಂತೆ ಇಂದು ಡಿವೈಎಸ್ಪಿ ಕೃಷ್ಣಮೂರ್ತಿ ತಮ್ಮ ಮನೆಯಲ್ಲಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಡಿವೈಎಸ್ಪಿ ಕೃಷ್ಣಮೂರ್ತಿ ಅವರ ವಿಚಾರಣೆ ನಡೆಸಲಾಗುತ್ತಿದೆ.

