ಇಂದು ಜಿಲ್ಲೆಗೆ ಬಸವಾದಿ ಶರಣರ ವೈಭವ ರಥಯಾತ್ರೆ

ಭಾಸ್ಕರ ಪತ್ರಿಕೆ
0


ತುಮಕೂರು: ಬಾಗಲಕೋಟೆ ಜಿಲ್ಲೆ ಕೂಡಲ ಸಂಗಮದಲ್ಲಿ ಏಪ್ರಿಲ್ 29 ಹಾಗೂ 30ರಂದು ಆಯೋಜಿಸಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ತಿಳಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಥಯಾತ್ರೆ ರಾಜ್ಯದಾದ್ಯಂತ ಸಂಚರಿಸಲಿದೆ.

ಈ ರಥಯಾತ್ರೆಯು ಏಪ್ರಿಲ್ 19ರಂದು ಮಧ್ಯಾಹ್ನ 1:30 ಗಂಟೆಗೆ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗಕ್ಕೆ ಆಗಮಿಸಲಿದ್ದು, ರಥಯಾತ್ರೆಯನ್ನು ಜಿಲ್ಲಾಡಳಿತದಿಂದ ಗೌರವಯುತವಾಗಿ ಸ್ವಾಗತಿಸಿ ಬೀಳ್ಕೊಡಲಾಗುವುದು.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಪರಿಷತ್ತು, ಸರ್ಕಾರಿ ಅಧಿಕಾರಿ/ನೌಕರರು, ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು, ಜಿಲ್ಲೆಯ ವಿವಿಧ ಸಮುದಾಯದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*