ಚಿಕ್ಕಮಗಳೂರು: ಕಾಫಿನಾಡಲ್ಲಿ ಮತ್ತೊಂದು ರೈತ ಆತ್ಮಹತ್ಯೆ -– ಸಾಲದ ಸಂಕಷ್ಟಕ್ಕೆ ಯುವ ಕೃಷಿಕ ಬಲಿ

ಭಾಸ್ಕರ ಪತ್ರಿಕೆ
0


ಚಿಕ್ಕಮಗಳೂರು: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ನಿನ್ನೆ ಮತ್ತೊಬ್ಬ ಕಾಫಿ ಬೆಳೆಗಾರನು ಸಾಲದ ಬಾಧೆಯಿಂದ  ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಾಲೂಕಿನ ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (35) ಎಂಬ ಯುವ ರೈತ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೈಸಾಲ ಸೇರಿ ವಿವಿಧ ರಾಷ್ಟ್ರೀಯ ಬ್ಯಾಂಕ್‌ ಗಳಿಂದ ಸಾವಿರಾರು ರೂಪಾಯಿ ಸಾಲ ಪಡೆದಿದ್ದ ಅರುಣ್, ಸಾಲ ತೀರಿಸಲಾಗದೆ ತೀವ್ರ ಮಾನಸಿಕ ದೌರ್ಬಲ್ಯಕ್ಕೆ ಒಳಗಾಗಿದ್ದರೂ ಸಹಾಯ ದೊರೆತಿಲ್ಲ.

ಘಟನೆಯ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಪ್ರತಿ ವರ್ಷಾ ಕಾಫಿ ಬೆಳೆಗಾರರು ಹವಾಮಾನ ವೈಪರೀತ್ಯ, ಬೆಲೆ ಇಳಿಕೆ ಹಾಗೂ ಸಾಲದ ಬಾಧೆಯಿಂದ ಸಂಕಷ್ಟ ಅನುಭವಿಸುತ್ತಿರುವುದು ಕರ್ನಾಟಕದ ಹಸಿರು ಬೆಲ್ಟ್‌ ಗೆ ಕತ್ತಲೆ ನೆರಳು ಬೀರುತ್ತಿರುವುದು ಸ್ಪಷ್ಟವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*