ಡೆತ್ ನೋಟ್ ಬರೆದಿಟ್ಟು 28 ವರ್ಷದ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ…!

ಭಾಸ್ಕರ ಪತ್ರಿಕೆ
0


ಚಿಕ್ಕಮಗಳೂರು: ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.

ಮೃತನನ್ನ 28 ವರ್ಷದ ಮಧು ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ‌ ಸಲ್ಲಿಸುತ್ತಿದ್ದರು.

ಕಳೆದ ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ಆದರೆ, ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*