ನವಿಲಿಗೆ KSRTC ಬಸ್ ಡಿಕ್ಕಿ: ಬಸ್ ನ ಗಾಜು ಪುಡಿ ಪುಡಿ, ನವಿಲು ಸಾವು

ಭಾಸ್ಕರ ಪತ್ರಿಕೆ
0

ಚಿಕ್ಕಮಗಳೂರು:  KSRTC ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ನವಿಲು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ನಡೆದಿದೆ.

ಬಸ್ ಕಡೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು, ಈ ವೇಳೆ ಬಸ್ ಗೆ ಅಡ್ಡಲಾಗಿ ನವಿಲು ಹಾರಿದ ವೇಳೆ ಬಸ್ ನವಿಲಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬಸ್ಸಿನ ಗಾಜು ಪುಡಿ ಪುಡಿಯಾಗಿದ್ದು, ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.

ನವಿಲನ್ನು ಕಂಡ ತಕ್ಷಣವೇ ಬಸ್ ಚಾಲಕ ಬಸ್ ನಿಲ್ಲಿಸಿದದಾರೆ. ಆದರೆ ಬಸ್ ನ ಗಾಜಿಗೆ ಡಿಕ್ಕಿ ಹೊಡೆದು ನವಿಲು ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*