ತಿಪಟೂರು: ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಮಾಜ ಸೇವಕರಾದ ಲೋಕೇಶ್ವರ್ ಅವರ 67ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ವಿನಾಯಕ ನಗರದಲ್ಲಿರುವ ಅವರ ನಿವಾಸದಲ್ಲಿ ಇಂದು ನಿವೃತ್ತ ಸೈನಿಕರಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಣೆಯನ್ನು ಮಾಡಲಾಯಿತು, ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ ಸಿ ನಾಗೇಶ್, ನಗರಸಭಾ ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯರಾದ ಸೊಪ್ಪು ಗಣೇಶ್, ಬಸವರಾಜ್, ಭಾರತಿ ಮಂಜುನಾಥ್, ರೇಣುಸೇರಿದಂತೆ ಲೋಕೇಶ್ವರ್ ಅಭಿಮಾನಿಗಳು ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
