ತಿಪಟೂರು: ಹಾಸನ ಸರ್ಕಲ್ ಭಾಸ್ಕರ ಪತ್ರಿಕೆಯ ಕಚೇರಿಯ ಬಳಿ ಶಿಕ್ಷಕರ ದಿನಾಚರಣೆಯನ್ನು ಮಕ್ಕಳಿಗೆ ಪುಸ್ತಕ ಮತ್ತು ಪೆನ್ನನ್ನು ವಿತರಿಸುವ ಮೂಲಕ ಹಾಗೂ ಭಾರತದ ರಾಷ್ಟ್ರಪತಿ ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಮಾಡುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡಾಕ್ಟರ್ ಭಾಸ್ಕರ್, ರಾಜು,ಈಶ್ವರ್ ಆಡಿಟರ್, ದರಣೇಶ್, ಕಲ್ಪತರು ವಿದ್ಯಾ ಸಂಸ್ಥೆ ಸಿಬ್ಬಂದಿ ಸಿ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
