ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಖಂಡನೆ

ಭಾಸ್ಕರ ಪತ್ರಿಕೆ
0

ಮಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಇವರ ಮೇಲೆ ಕೋರ್ಟ್ ಹಾಲ್ ನಲ್ಲಿ ಕಲಾಪದ ವೇಳೆಯೇ  ಹಿರಿಯ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವ ಸಂವಿಧಾನ ವಿರೋಧಿ  ಘಟನೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ, ದ. ಕ ಜಿಲ್ಲಾ ಸಮಿತಿಯು ಅತ್ಯುಗ್ರವಾಗಿ ಖಂಡಿಸಿದೆ.

ಈ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ನೀತಿಯನ್ನು ಒಪ್ಪದ ಮನುವಾದಿ ಮನಸ್ಥಿತಿಯ ಸನಾತನ ವೈದಿಕ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿರುವ ವಕೀಲರಾದ ರಾಜೇಶ್ ಕಿಶೋರ್ ಎಂಬವರನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ತಕ್ಷಣವೇ ಅಮಾನತುಗೊಳಿಸಬೇಕು. ಈತನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ  ಸದಾಶಿವ ಪಡುಬಿದ್ರಿ ಜಿಲ್ಲಾ ಸಂಚಾಲಕರು,  ಜಿಲ್ಲಾ ಮುಖಂಡರುಗಳಾದ ರಘು ಎಕ್ಕಾರ್, ಕೃಷ್ಣಾನಂದ ಡಿ.,ಸರೋಜಿನಿ ಬಂಟ್ವಾಳ, ಕಮಲಾಕ್ಷ ಬಜಾಲ್ ಆಗ್ರಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*